ಹೊಸದುರ್ಗ: ತಾಲ್ಲೂಕಿನ ಮಾಡದಕೆರೆಯಲ್ಲಿ ಭಾನುವಾರ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ರೈತರೊಬ್ಬರು ಮೃತಪಟ್ಟಿದ್ದಾರೆ.
ಮಾಡದಕೆರೆಯ ನಾಗಪ್ಪ (70) ಮೃತಪಟ್ಟವರು.ಭಾನುವಾರ ಮಧ್ಯಾಹ್ನ ಉಳುಮೆ ಮಾಡಲು ಹೋಗಿದ್ದ ಅವರು ಸಂಜೆಯಾದರೂ ಪತ್ತೆಯಾಗಿರಲಿಲ್ಲ.
ಬಳಿಕ ಜಮೀನಿನಲ್ಲಿದ್ದ ಕೃಷಿಹೊಂಡದಲ್ಲಿ ಮೃತ ದೇಹ ತೇಲುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.