ಚಿತ್ರದುರ್ಗ: ಸಾಲ ಬಾಧೆ ತಾಳಲಾರದೇ ರೈತ ಈರಣ್ಣ (45) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಯಾದಲಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅನಾರೋಗ್ಯ ಪೀಡಿತ ಪತ್ನಿ ಹಾಗೂ ಕೈಕೊಟ್ಟ ಬೆಳೆ ಹಿನ್ನೆಲೆಯಲ್ಲಿ ಈರಣ್ಣ ಸಾಲಕ್ಕೆ ಸಿಲುಕಿದ್ದರು.
ದೊಡ್ಡ ಉಳ್ಳಾರ್ತಿ ಪ್ರಗತಿ ಗ್ರಾಮೀಣ ಬ್ಯಾಂಕ್ ನಲ್ಲಿ ಮೂರು ಲಕ್ಷ ಸಾಲ ಪಡೆದಿದ್ದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.