ಚಿಕ್ಕಜಾಜೂರು: ಸಮೀಪದ ಬಂಡೆಬೊಮ್ಮೇನಹಳ್ಳಿ ವಡ್ಡರಹಟ್ಟಿ ಗ್ರಾಮದಲ್ಲಿ ಭಾನುವಾರ ಸಾಲದ ಹೊರೆಯಿಂದ ರೈತ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರತ್ನಮ್ಮ (50) ಆತ್ಮಹತ್ಯೆ ಮಾಡಿಕೊಂಡವರು.
‘ಮುತ್ತುಗದೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ₹ 2 ಲಕ್ಷ, ಚಿತ್ರದುರ್ಗ ಜಿಲ್ಲಾ ಸಹಕಾರ ಬ್ಯಾಂಕ್ನಲ್ಲಿ ₹ 80 ಸಾವಿರ ಹಾಗೂ ಸ್ವಸಹಾಯ ಸಂಘಗಳಲ್ಲಿ ₹ 60 ಸಾವಿರ ಸೇರಿ ₹ 4 ಲಕ್ಷ ಸಾಲ ಇತ್ತು. ಈ ವರ್ಷದ ಅಧಿಕ ಮಳೆಯಿಂದಾಗಿ ಬೆಳೆ ಹಾನಿಯಾಗುವ ಭೀತಿಯಲ್ಲಿ ಮತ್ತು ಸಾಲ ತೀರಿಸಲಾಗದ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬದವರು ತಿಳಿಸಿದ್ದಾರೆ.
ಚಿಕ್ಕಜಾಜೂರು ಪೊಲೀಸ್ ಠಾಣೆಯ ಪಿಎಸ್ಐ ಬಾಹುಬಲಿ ಎಂ. ಪಡನಾಡ ದೂರು ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.