ADVERTISEMENT

ಬಂಟ್ವಾಳ ಸಿಪಿಐ ಕಚೇರಿಗೆ ಬೆಂಕಿ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 16:15 IST
Last Updated 5 ಜನವರಿ 2019, 16:15 IST
ಬಂಟ್ವಾಳದಲ್ಲಿ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದನ್ನು ಖಂಡಿಸಿ ಪಕ್ಷದ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು
ಬಂಟ್ವಾಳದಲ್ಲಿ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದನ್ನು ಖಂಡಿಸಿ ಪಕ್ಷದ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು   

ಚಿತ್ರದುರ್ಗ: ಬಂಟ್ವಾಳ ಬೈಪಾಸಿನಲ್ಲಿರುವ ಭಾರತೀಯ ಕಮ್ಯುನಿಸ್ಟ್‌ ಪಕ್ಷದ (ಸಿಪಿಐ) ಕಚೇರಿಗೆ ಬೆಂಕಿ ಇಟ್ಟು, ಧ್ವಂಸಗೊಳಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಸಿಪಿಐ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಪಕ್ಷದ ಕಚೇರಿಯಿಂದ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಂಟ್ವಾಳ ಪಕ್ಷದ ಕಚೇರಿಯ ಮೇಲೆ ನಡೆದ ಕೃತ್ಯವನ್ನು ಖಂಡಿಸಿದರು.

ಸಿಪಿಐ ಕಚೇರಿಗೆ ಬೆಂಕಿ ಹಚ್ಚಿದ್ದರಿಂದ ಪಕ್ಷದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಜತೆಗೆ ಬೀಡಿ ಕಾರ್ಮಿಕರ ಹಾಗೂ ಸಾವಿರಾರು ಕಟ್ಟಡ ಕಾರ್ಮಿಕರ ಅರ್ಜಿಗಳು, ಇತರೆ ಸೌಲಭ್ಯಗಳಿಗೆ ಸಂಬಂಧಿಸಿದ ಅನೇಕ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ.

ADVERTISEMENT

ಇಂತಹ ಸಮಾಜಘಾತುಕ ಶಕ್ತಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾರ್ಯದರ್ಶಿ ಸಿ.ವೈ. ಶಿವರುದ್ರಪ್ಪ, ಕಾರ್ಯಕರ್ತರಾದ ಉಮಾಪತಿ, ಸುರೇಶ್‌ಬಾಬು, ಬಸವರಾಜಪ್ಪ, ಸತ್ಯಕೀರ್ತಿ, ಅಶೋಕ್, ಅತಿಕ್‌ವುಲ್ಲಾ, ಚಂದ್ರಪ್ಪ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.