ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಗೆ ತೆರಳುತ್ತಿದ್ದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ನಗರದಲ್ಲಿ ಬುಧವಾರ ಮಧ್ಯಾಹ್ನದ ಊಟ ಸವಿದರು.
ಇದೇ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದ ಅವರನ್ನು ಜಿಲ್ಲಾಡಳಿತ ಆತ್ಮೀಯವಾಗಿ ಸ್ವಾಗತ ಕೋರಿತು. ಸುಮಾರು ಒಂದು ಗಂಟೆ ಪ್ರವಾಸಿ ಮಂದಿರದಲ್ಲಿದ್ದ ರಾಜ್ಯಪಾಲರು ಬಳಿಕ ಪ್ರಯಾಣ ಮುಂದುವರಿಸಿದರು.
ಬೆಳಿಗ್ಗೆ 11.45ಕ್ಕೆ ಚಿತ್ರದುರ್ಗಕ್ಕೆ ಬಂದ ರಾಜ್ಯಪಾಲರಿಗೆ ಪೊಲೀಸರು ಗೌರವ ಶ್ರೀರಕ್ಷೆ ನೀಡಿದರು. ಹೋಟೆಲ್ ಐಶ್ವರ್ಯ ಫೋರ್ಟ್ನಿಂದ ತಂದಿದ್ದ ಊಟವನ್ನು ಸವಿದರು. ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯಿತಿ ಸಿಇಒಡಾ.ಕೆ.ನಂದಿನಿದೇವಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.