ADVERTISEMENT

ಗಾಂಜಾ ಪ್ರಕರಣ: ಹೆಡ್‌ಕಾನ್‌ಸ್ಟೆಬಲ್‌ ಅಮಾನತು

​ಪ್ರಜಾವಾಣಿ ವಾರ್ತೆ
Published 21 ಮೇ 2022, 4:23 IST
Last Updated 21 ಮೇ 2022, 4:23 IST

ಚಿತ್ರದುರ್ಗ: ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಶ್ರೀನಿವಾಸ್‌ ಅಲಿಯಾಸ್‌ ಜಪಾನ್‌ ಸೀನ ಪರಾರಿಯಾದ ಪ್ರಕರಣದಲ್ಲಿ ನಗರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶ್ರೀನಿವಾಸ್‌ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ್‌ ಆದೇಶ ಹೊರಡಿಸಿದ್ದಾರೆ.

ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಮೇ 15ರಂದು ವಶಕ್ಕೆ ಪಡೆದಿದ್ದರು. ಇದರಲ್ಲಿ ಜಪಾನ್‌ ಸೀನನೂ ಇದ್ದ. ಮೂತ್ರ ವಿಸರ್ಜನೆಯ ನೆಪವೊಡ್ಡಿ ವಾಹನದಿಂದ ಇಳಿದಿದ್ದ ಆರೋಪಿ ಪರಾರಿಯಾಗಿದ್ದನು. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದರು.

ಈ ಬಗ್ಗೆ ತನಿಖೆ ನಡೆಸಿದ ಡಿವೈಎಸ್‌ಪಿ ಪಾಂಡುರಂಗಪ್ಪ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.