ಚಿತ್ರದುರ್ಗ: ಬಿರುಗಾಳಿ ಸಹಿತ ಸುರಿದ ಮಳೆಗೆ ತಾಲ್ಲೂಕಿನ ಚಿಕ್ಕೇನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಚಾವಣಿ ಕುಸಿದಿದೆ.
ರಾತ್ರಿ ಆರಂಭವಾದ ಮಳೆಗೆ ಮೂರು ಕೊಠಡಿಗಳಿಗೆ ಹಾನಿಯಾಗಿದೆ. ಚಾವಣಿಗೆ ಹಾಕಿದ ಶೀಟುಗಳು ಹಾರಿ ಹೋಗಿವೆ. ಈಚೆಗೆ ಈ ಚಾವಣಿ ದುರಸ್ಥಿ ಮಾಡಲಾಗಿತ್ತು.
ಪಕ್ಕದ ಗ್ರಾಮ ದೊಡ್ಡಾಲಘಟ್ಟದಲ್ಲೂ ಆರು ಮನೆಗಳಿಗೆ ಹಾನಿಯಾಗಿದೆ. ಕಬ್ಬಿಣದ ತುಂಡು ಬಿದ್ದು ರಂಗಪ್ಪ ಎಂಬುವರು ಗಾಯಗೊಂಡಿದ್ದಾರೆ.
ಭಾರಮಸಾಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.