ADVERTISEMENT

ಹಿರಿಯೂರು ಬಳಿ ಲಾರಿಗೆ ಟೆಂಪೊ ಡಿಕ್ಕಿ: ಇಬ್ಬರ ಸಾವು, ಹತ್ತು ಜನರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಮಾರ್ಚ್ 2022, 3:01 IST
Last Updated 14 ಮಾರ್ಚ್ 2022, 3:01 IST
ಹಿರಿಯೂರು ಬಳಿ ಲಾರಿಗೆ ಟೆಂಪೊ ಡಿಕ್ಕಿ ಹೊಡೆದಿರುವುದು
ಹಿರಿಯೂರು ಬಳಿ ಲಾರಿಗೆ ಟೆಂಪೊ ಡಿಕ್ಕಿ ಹೊಡೆದಿರುವುದು   

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಸಮೀಪದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ.

ಮೃತರಲ್ಲಿ ಒಬ್ಬರನ್ನು ಶ್ವೇತಾ (24) ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಹತ್ತು ಜನರು ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೆಂಪೊ ಗೋಕರ್ಣದಿಂದ ಬೆಂಗಳೂರು ಕಡೆ ಸಾಗುವಾಗ ಈ ಅವಘಡ ಸಂಭವಿಸಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.