
ಪ್ರಜಾವಾಣಿ ವಾರ್ತೆ
ಹೊಳಲ್ಕೆರೆ: ತಾಲ್ಲೂಕಿನ ಹೊರಕೆರೆ ದೇವರಪುರದಲ್ಲಿ ತಹಶೀಲ್ದಾರ್ ವಿಜಯಕುಮಾರ ನೇತೃತ್ವದಲ್ಲಿ ಮಂಗಳವಾರ ಲಕ್ಮೀನರಸಿಂಹ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆಯಿತು.
ಆರ್ಥಿಕ ವರ್ಷದ ಎರಡನೇ ಹಂತದ ಎಣಿಕೆ ಕಾರ್ಯವಾಗಿದ್ದು, ಹುಂಡಿಯಲ್ಲಿ ₹11.9 ಲಕ್ಷ ಹಣ ಸಂಗ್ರಹ ಆಗಿದೆ.
ತಾಳ್ಯ ಹೋಬಳಿಯ ಉಪ ತಹಶೀಲ್ದಾರ್ ಡಿ.ಟಿ. ಅಶೋಕ್, ರಾಜಸ್ವ ನಿರೀಕ್ಷಕ ಎಂ.ಎಸ್. ರಂಗನಾಥ್, ಎಸ್ಎಲ್ಎನ್ ಟ್ರಸ್ಟ್ ಅಧ್ಯಕ್ಷ ಎಚ್.ಡಿ. ರಂಗಯ್ಯ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಿ.ಎನ್. ರವೀಂದ್ರ ಮತ್ತು ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.