ADVERTISEMENT

ಚುನಾವಣೆ ಗೆದ್ದಿದ್ದರೆ ಮನೆಗೆ ಹೋಗಲಿ

ಬಿಜೆಪಿಗೆ ಡಾ.ಜಿ. ಪರಮೇಶ್ವರ ತಿರುಗೇಟು

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2020, 7:51 IST
Last Updated 25 ಅಕ್ಟೋಬರ್ 2020, 7:51 IST
ಶಾಸಕ ಡಾ.ಜಿ.ಪರಮೇಶ್ವರ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಚಿತ್ರದುರ್ಗದ ಯಾದವ ಮಹಾಸಂಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಆಶೀರ್ವಾದ ಪಡೆದರು.
ಶಾಸಕ ಡಾ.ಜಿ.ಪರಮೇಶ್ವರ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಚಿತ್ರದುರ್ಗದ ಯಾದವ ಮಹಾಸಂಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಆಶೀರ್ವಾದ ಪಡೆದರು.   

ಚಿತ್ರದುರ್ಗ: ಮತದಾನಕ್ಕೂ ಮೊದಲೇ ಚುನಾವಣೆಯಲ್ಲಿ ಗೆದ್ದಿರುವುದಾಗಿ ಹೇಳುತ್ತಿರುವ ಬಿಜೆಪಿ, ಪ್ರಚಾರ ಕಾರ್ಯ ಬಿಟ್ಟು ಮನೆಗೆ ಹೋಗಲಿ ಎಂದು ಶಾಸಕ ಡಾ.ಜಿ.ಪರಮೇಶ್ವರ ತಿರುಗೇಟು ನೀಡಿದರು.

ಇಲ್ಲಿನ ಯಾದವ ಮಹಾಸಂಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದ ಅವರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪರ ಅಲೆ ಎದ್ದಿದ್ದು, ಗೆಲುವು ನಿಶ್ಚಿತ’ ಎಂಬ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ADVERTISEMENT

‘ಬಿಜೆಪಿ ಹೆಣಗಳ ಮೇಲೆ, ಕೋವಿಡ್‌ ಲಸಿಕೆಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಗ್ಧ ಜನರ ಮನವೊಲಿಕೆಗೆ ಪ್ರಯತ್ನಿಸುತ್ತಿದೆ. ಕಾಂಗ್ರೆಸ್‌ ರಾಜಕಾರಣ ಮಾಡುತ್ತಿದೆಯೇ ವಿನಾ ಗೂಂಡಾಗಿರಿಯಲ್ಲ. ಗೂಂಡಾಗಿರಿಯ ವಿವರಣೆಯನ್ನು ಬಿಜೆಪಿಯೇ ನೀಡಲಿ’ ಎಂದು ಹೇಳಿದರು.

ಮಾಜಿ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ‘ಶಿರಾದಲ್ಲಿ ಎದ್ದಿರುವುದು ಸುನಾಮಿ ಅಲೆ ಎಂದವರು ಹುಚ್ಚಾಸ್ಪತ್ರೆಯಿಂದ ಬಂದಿರಬೇಕು. ಸರ್ಕಾರದ ಯೋಜನೆಗಳನ್ನು ಜನರ ಮುಂದಿಟ್ಟು ಬಿಜೆಪಿ ಮತ ಕೇಳಲಿ. ಬಿಜೆಪಿ ನಾಯಕರು ಕೋವಿಡ್‌ ನೆಪದಲ್ಲಿ ದುಡ್ಡು ಮಾಡಿಕೊಂಡು ತಿರುಗಾಟ ನಡೆಸುತ್ತಿದ್ದಾರೆ’ ಎಂದು
ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.