ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದಿಂದ ಭಾನುವಾರ ಜಿಲ್ಲೆಯಲ್ಲಿ ಗೆಜೆಟೆಡ್ ಪ್ರೊಬೆಷನರಿ ಮರು ಸ್ಪರ್ಧಾತ್ಮಕ ಪರೀಕ್ಷೆ ಶಾಂತಿಯುತವಾಗಿ ನಡೆಯಿತು.
ನಗರದಲ್ಲಿ 25 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಒಟ್ಟು 8,170 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ ಬೆಳಿಗ್ಗೆ ನಡೆದ ಪತ್ರಿಕೆ-1 ರ ಪರೀಕ್ಷೆಗೆ 3,736 ಅಭ್ಯರ್ಥಿಗಳು ಹಾಜರಾದರೆ, 4,434 ಅಭ್ಯರ್ಥಿಗಳು ಗೈರು ಹಾಜರಾದರು. ಮಧ್ಯಾಹ್ನ ನಡೆದ ಪತ್ರಿಕೆ-2ರ ಪರೀಕ್ಷೆಗೆ 3,704 ಅಭ್ಯರ್ಥಿಗಳು ಹಾಜರಾಗಿ, 4,466 ಅಭ್ಯರ್ಥಿಗಳು ಗೈರಾಗಿದ್ದಾರೆ.
ಅಕ್ರಮ ತಡೆಗೆ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಸಲಾಗಿತ್ತು. ಪ್ರತಿ ಕೊಠಡಿಯಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ, ಫೇಸ್ ರೆಕಗ್ನೈಸೇಷನ್ ಹಾಗೂ ಬಯೋಮೆಟ್ರಿಕ್ ಹಾಜರಾತಿ ಹಾಕಲಾಯಿತು. ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಲಾಯಿತು.
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.