ADVERTISEMENT

ಚಿತ್ರದುರ್ಗ: ಕೃಷಿ ಸಹಾಯಕ ನಿರ್ದೇಶಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ದಾಳಿ; 500 ಗ್ರಾಂ ಚಿನ್ನ, 4 ಕೆ.ಜಿ ಬೆಳ್ಳಿ ಆಭರಣ ಪತ್ತೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 5:53 IST
Last Updated 14 ಅಕ್ಟೋಬರ್ 2025, 5:53 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

– ಪ್ರಜಾವಾಣಿ ಚಿತ್ರ

ಚಿತ್ರದುರ್ಗ: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಮೇರೆಗೆ ಹೊಳಲ್ಕೆರೆ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಚಂದ್ರಕುಮಾರ್‌ಗೆ ಸೇರಿದ 2 ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದರು.

ADVERTISEMENT

‘ಚಿತ್ರದುರ್ಗದ ತರಳಬಾಳು ನಗರದಲ್ಲಿ ಹಾಗೂ ಜಿಲ್ಲೆಯ  ಹೊಳಲ್ಕೆರೆ ತಾಲ್ಲೂಕು ಟಿ.ನುಲೇನೂರು ಗ್ರಾಮದಲ್ಲಿರುವ ಮನೆಗಳನ್ನು ಪರಿಶೀಲಿಸಲಾಗಿದೆ. ₹ 4 ಕೋಟಿ ಮೌಲ್ಯದ 2 ಮನೆಗಳು, 500 ಗ್ರಾಂ ಚಿನ್ನ, 4 ಕೆ.ಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಪರಿಶೀಲನೆ ಮುಂದುವರಿದಿದೆ’ ಎಂದು ದಾಳಿಯ ನೇತೃತ್ವ ವಹಿಸಿದ್ದ ಎಸ್‌ಪಿ ವಾಸುದೇವ ರಾಮ್‌ ತಿಳಿಸಿದರು. ದಾಳಿಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಮೃತ್ಯುಂಜಯ, ಇನ್‌ಸ್ಪೆಕ್ಟರ್‌ ಮಂಜುನಾಥ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.