ಪ್ರಜಾವಾಣಿ ವಾರ್ತೆ
ಚಿತ್ರದುರ್ಗ: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರು ಸೋಮವಾರ ಗುಣಮುಖರಾಗಿದ್ದಾರೆ.
ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾದ ಶಾಸಕರು ಮನೆಗೆ ಬಂದಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇನ್ನೂ ಹತ್ತು ದಿನ ಪ್ರತ್ಯೇಕವಾಗಿ ಇರಲಿದ್ದಾರೆ. ಇವರಿಗೆ ಕಳೆದ ಏ.12ರಂದು ಅವರಿಗೆ ಕೋವಿಡ್ ಖಚಿತವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.