ಮೊಳಕಾಲ್ಮುರು: ತಾಲ್ಲೂಕಿನ ಪಿಎಲ್ಡಿ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಭಾನುವಾರ ಆಯ್ಕೆ ಪ್ರಕ್ರಿಯೆ ನಡೆಯಿತು.
ನೂತನ ಅಧ್ಯಕ್ಷರಾಗಿ ಜಾಗೀರ ಬುಡ್ಡೇನಹಳ್ಳಿ ಕ್ಷೇತ್ರದ ಎಚ್.ಟಿ. ನಾಗೀರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಕೊಂಡ್ಲಹಳ್ಳಿ ಕ್ಷೇತ್ರದ ಕೆ.ಬಿ. ನಾಗರಾಜ್ ಅವಿರೋಧವಾಗಿ ಆಯ್ಕೆಯಾದರು. 12 ನಿರ್ದೇಶಕ ಸ್ಥಾನಗಳನ್ನು ಬ್ಯಾಂಕ್ ಹೊಂದಿದೆ. ಸಹಕಾರ ಸಂಘಗಳ ವಿಸ್ತರಣಾಧಿಕಾರಿ ಕೆ. ಮಹೇಶ್ ಚುನಾಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
‘ಗ್ರಾಮೀಣ ಪ್ರದೇಶದ ರೈತರಿಗೆ ಸುಲಭವಾಗಿ ಕಡಿಮೆ ಬಡ್ಡಿ ದರದಲ್ಲಿ ಕೃಷಿ ಸಾಲ ಪಡೆಯಲು ಪಿಎಲ್ಡಿ ಬ್ಯಾಂಕ್ ಹೆಚ್ಚು ಸಹಕಾರಿ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಜನರಿಗೆ ಸೌಲಭ್ಯಗಳನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಎಚ್.ಟಿ. ನಾಗೀರೆಡ್ಡಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.