ಚಳ್ಳಕೆರೆ: ಮದ್ಯ ಕುಡಿಯಲು ಹಣ ನೀಡಿಲ್ಲ ಎಂಬ ಕಾರಣಕ್ಕೆ ತೋಟದ ಮನೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಾಲ್ಲೂಕಿನ ರೇಣುಕಾಪುರ ಗ್ರಾಮದ ಆರೋಪಿ ಶಿವಣ್ಣ (27) ನನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕುಡಿತದ ಚಟಕ್ಕೆ ಒಳಗಾಗಿದ್ದ ಆರೋಪಿ ಶಿವಣ್ಣ, ಸೋಮವಾರ ಕುಡಿಯಲು ಹಣ ನೀಡುವಂತೆ ಪತ್ನಿ ಫಾಲಾಕ್ಷ ಅವರನ್ನು ಪೀಡಿಸಿ ಹಲ್ಲೆ ಮಾಡಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದರು.ಕೊಲೆಯನ್ನು ಮರೆಮಾಚಲು ತೋಟದ ಮನೆಯಲ್ಲಿಯೇ ಆಕೆಯ ಕುತ್ತಿಗೆಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತೆ ಬಿಂಬಿಸಿದ್ದ. ಈ ಪ್ರಕರಣ ತಳಕು ಠಾಣೆಯಲ್ಲಿ ದಾಖಲಾಗಿತ್ತು.
ಉಪ ವಿಭಾಗದ ಡಿವೈಎಸ್ಪಿ ಕೆ.ವಿ.ಶ್ರೀಧರ್ ಮಾರ್ಗದರ್ಶನದಲ್ಲಿ, ರಚಿಸಲಾಗಿದ್ದ ನಿರೀಕ್ಷಕ ಎಸ್.ಜೆ. ತಿಪ್ಪೇಸ್ವಾಮಿ, ದಿನಕರ್, ಡಿ.ತಿಮ್ಮಪ್ಪ ಅವರ ತಂಡ ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.