ADVERTISEMENT

ರಾಹುಲ್‌ ಸಂವಾದ| ರಾಜಕೀಯ ಮಾತಾಡದಂತೆ ಹೊಸಮಠದ ಸ್ವಾಮೀಜಿಗೆ ಮುರುಘಾ ಶರಣರ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 3:25 IST
Last Updated 4 ಆಗಸ್ಟ್ 2022, 3:25 IST
ಮಠಾಧೀಶರೊಂದಿಗೆ ರಾಹುಲ್‌ ಗಾಂಧಿ ಸಂವಾದ
ಮಠಾಧೀಶರೊಂದಿಗೆ ರಾಹುಲ್‌ ಗಾಂಧಿ ಸಂವಾದ    

ಚಿತ್ರದುರ್ಗ: ‘ಇಷ್ಟಲಿಂಗ ದೀಕ್ಷೆ ಪಡೆದ ರಾಹುಲ್‌ ಗಾಂಧಿ ಅವರು ಮುಂದಿನ ಪ್ರಧಾನಿ ಆಗಲಿದ್ದಾರೆ’ ಎಂಬಹಾವೇರಿ ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಅವರ ಅಭಿಪ್ರಾಯಕ್ಕೆ ಶಿವಮೂರ್ತಿ ಮುರುಘಾ ಶರಣರು ಆಕ್ಷೇಪ ವ್ಯಕ್ತಪಡಿಸಿದರು. ರಾಜಕೀಯ ಮಾತನಾಡದಂತೆ ಸೂಚನೆ ನೀಡಿದರು.

ಇಲ್ಲಿಯ ಮುರುಘಾ ಮಠಕ್ಕೆ ಬುಧವಾರ ಭೇಟಿ ನೀಡಿದ ರಾಹುಲ್‌ ಗಾಂಧಿಮಠಾಧೀಶರೊಂದಿಗೆ ಸಂವಾದ ನಡೆಸಿದರು. ಇಷ್ಟಲಿಂಗ ದೀಕ್ಷೆ, ಪೂಜೆ, ಬಸವತತ್ವ ಹಾಗೂ ಪ್ರಚಲಿತ ವಿದ್ಯಮಾನಗಳಿಗೆ ಸಂಬಂಧಿಸಿ ಚರ್ಚಿಸಿದರು.

ಮಠಾಧೀಶರೊಂದಿಗೆ ಸಂವಾದ ನಡೆಸಿದ ಬಳಿಕ ಕಾಂಗ್ರೆಸ್‌ ನಾಯಕರು ಮಠದಿಂದ ತೆರಳಿದರು. ಸಭಾಂಗಣದಲ್ಲಿದ್ದ ಮಠಾಧೀಶರು ಮಾತು ಮುಂದುವರಿಸಿದರು.ಬಸವ ಶಾಂತಲಿಂಗ ಸ್ವಾಮೀಜಿ ಮಾತನಾಡುವಾಗ ರಾಹುಲ್‌ ಅವರ ರಾಜಕೀಯ ಭವಿಷ್ಯದ ಬಗ್ಗೆ ಉಲ್ಲೇಖಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.