ADVERTISEMENT

ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ: ನ್ಯಾಯಾಲಯದಲ್ಲಿ ಪೊಲೀಸ್ ಭದ್ರತೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 6:30 IST
Last Updated 1 ಸೆಪ್ಟೆಂಬರ್ 2022, 6:30 IST
ಚಿತ್ರದುರ್ಗದ ನ್ಯಾಯಾಲಯದ ಬಳಿ ಪೊಲೀಸರ ನಿಯೋಜನೆ
ಚಿತ್ರದುರ್ಗದ ನ್ಯಾಯಾಲಯದ ಬಳಿ ಪೊಲೀಸರ ನಿಯೋಜನೆ    

ಚಿತ್ರದುರ್ಗ: ಪೋಕ್ಸೊ ಪ್ರಕರಣದ ಆರೋಪಿ ಡಾ. ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಿದ್ದಾರೆ.

ನ್ಯಾಯಾಲಯದ ಮುಂಭಾಗದ ರಸ್ತೆಯ ಎರಡು ಕಡೆ ಬ್ಯಾರಿಕೇಡ್ ಆಳವಡಿಸಿದ್ದಾರೆ. ವಾಹನಗಳ ತಪಾಸಣೆ ನಡೆಸಿ ಸಂಚಾರಕ್ಕೆ ಅವಕಾಶ ನೀಡುತ್ತಿದ್ದಾರೆ.

ಈಗಾಗಲೇ ಸಂತ್ರಸ್ತ ಬಾಲಕಿಯರು ಕೋರ್ಟ್ ಗೆ ಹಾಜರಾಗಿದ್ದು, ಕೆಲ ಹೊತ್ತಿಗೆ ಜಾಮೀನು ಅರ್ಜಿಯ ವಿಚಾರಣೆ ಪ್ರಾರಂಭವಾಗಲಿದೆ. ಆದರೆ ಸಂತ್ರಸ್ತ ಬಾಲಕಿಯರು ಮುರುಘಾ ಶರಣರಿಗೆ ಜಾಮೀನು ನೀಡದಂತೆ ನ್ಯಾಯಾಧೀಶರಿಗೆ ಕೋರಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.