ಚಿತ್ರದುರ್ಗ: ‘ಕೊರೊನಾ ಹಿನ್ನೆಲೆಯಲ್ಲಿ ಮುರುಘಾಮಠ ಹಾಗೂ ಮುರುಘಾವನಕ್ಕೆ 2 ತಿಂಗಳಿನಿಂದ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಜೂನ್ 8ರಿಂದ ಪುನಾ ಅವಕಾಶ ಕಲ್ಪಿಸಲಾಗಿದೆ’ ಎಂದು ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.
‘2020ರಲ್ಲಿ ಅನಾರೋಗ್ಯಕರವಾದ ಸಂದರ್ಭವನ್ನು ಎದುರಿಸುತ್ತಿದ್ದೇವೆ. ಅನೇಕ ತಲ್ಲಣಗಳು, ಕಂಡರಿಯದ ದುಸ್ಥಿತಿ, ಅಸಹಾಯಕ ಪರಿಸ್ಥಿತಿ ಉಂಟಾಗಿದೆ. ಕೋವಿಡ್-19 ಪ್ರಕರಣ ಹೆಚ್ಚುತ್ತಿವೆ. ದೇಶದ ಆರ್ಥಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ವಿಷಾದಿಸಿದರು.
‘ಮಾನವ ದನಕರುಗಳಿಗೆ ಮೂಗುದಾರ ಹಾಕಿದಂತೆ ಕೊರೊನಾ ಮಾನವನಿಗೆ ಮೂಗುದಾರ ಹಾಕಿದೆ. ಆದ್ದರಿಂದ ಮಠ, ಮುರುಘಾವನಕ್ಕೆ ಭೇಟಿ ನೀಡುವ ಸಾರ್ವಜನಿಕರು ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್ ಬಳಸಿ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಂದೆರೆಡು ದಿನ ನೋಡಿಕೊಂಡು ನಿತ್ಯ ದಾಸೋಹ ಆರಂಭಿಸಲು ತೀರ್ಮಾನಿಲಾಗುವುದು’ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.