ADVERTISEMENT

ಮಠ ರಕ್ತ ಸಂಬಂಧದಿಂದ ಮುಕ್ತ: ಶಿವಮೂರ್ತಿ ಮುರುಘಾ ಶರಣರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 21:58 IST
Last Updated 15 ಫೆಬ್ರುವರಿ 2021, 21:58 IST
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು   

ಚಿತ್ರದುರ್ಗ: ಮುರುಘಾ ಮಠವನ್ನು ರಕ್ತ ಸಂಬಂಧದಿಂದ ಮುಕ್ತಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ. ಮಠದ ಘನತೆ ಮತ್ತು ಗೌರವ ಕಾಪಾಡುವ ಉದ್ದೇಶದಿಂದ ಹತ್ತು ಜನರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾಲ್ಕು ತಿಂಗಳ ಹಿಂದೆ ಮಠಕ್ಕೆ ಸಂಬಂಧಿಸಿದಂತೆ ವದಂತಿಯೊಂದು ಹಬ್ಬಿತ್ತು. ಸಣ್ಣ ತಪ್ಪೊಂದು ದೊಡ್ಡ ಅಪರಾಧಕ್ಕೆ ಅವಕಾಶ ಆಗಬಾರದು ಎಂಬ ಉದ್ದೇಶದಿಂದ ಶಿಸ್ತುಕ್ರಮ ಜರುಗಿಸಲಾಗಿದೆ. ಮಠಕ್ಕೆ, ಶರಣರಿಗೆ ಸಾಮಾಜಿಕ ಬದ್ಧತೆ ಇದೆ. ಇದರ ಆಧಾರದ ಮೇರೆಗೆ ಮಠ ಕಟ್ಟಲಾಗುತ್ತಿದೆ’ ಎಂದು ಹೇಳಿದರು.

‘ಮಠದಲ್ಲಿ ಸಾವಿರಾರು ಜನರು ಕಾರ್ಯನಿರ್ವಹಿಸುತ್ತಿದ್ದಾರೆ. ಒಬ್ಬೊಬ್ಬರ ಸ್ವಭಾವ ಭಿನ್ನವಾಗಿರುತ್ತದೆ. ಇತಿ–ಮಿತಿ ಮೀರಿ ನಡೆದುಕೊಳ್ಳುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯ. ಯಾವುದೇ ಒತ್ತಡಗಳಿಗೂ ಮಣಿಯುವುದಿಲ್ಲ’ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.