ಚಿತ್ರದುರ್ಗ: ಇಲ್ಲಿನ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ಸೊಲ್ಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಬೆಳಿಗ್ಗೆ 11.55 ಕ್ಕೆ ಆರಂಭವಾದ ಪ್ರತಿಭಟನೆ ಸುಮಾರು 45 ನಿಮಿಷ ನಡೆಯಿತು. ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಹಿಂಪಡೆಯಬೇಕು ಹಾಗೂ ರಾಜ್ಯ ಸರ್ಕಾರ ರೂಪಿಸಿದ ಭೂಸ್ವಾಧೀನ ಕಾಯ್ದೆಗಳನ್ನು ವಾಪಾಸ ಪಡೆಯಬೇಕು ಎಂದು ಒತ್ತಾಯಿಸಿದರು.
ಹೆದ್ದಾರಿ ತಡೆಯಿಂದ ಕಿ.ಮೀ. ಗೂ ಹೆಚ್ಚು ದೂರದ ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.