ADVERTISEMENT

ಆಧುನಿಕ ಕರ್ನಾಟಕ ನಿರ್ಮಾಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪಾತ್ರ ಮಹತ್ವದ್ದು.

​ಪ್ರಜಾವಾಣಿ ವಾರ್ತೆ
Published 8 ಜೂನ್ 2023, 14:10 IST
Last Updated 8 ಜೂನ್ 2023, 14:10 IST
ಹಿರಿಯೂರಿನ ಅಂಬೇಡ್ಕರ್ ಪಿಯು ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಹಾಗೂ ದಿವಂಗತ ದೇವರಾಜ ಅರಸು ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಗೌತಂ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಬಿ.ಪಿ. ತಿಪ್ಪೇಸ್ವಾಮಿ ಉದ್ಘಾಟಿಸಿದರು
ಹಿರಿಯೂರಿನ ಅಂಬೇಡ್ಕರ್ ಪಿಯು ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಹಾಗೂ ದಿವಂಗತ ದೇವರಾಜ ಅರಸು ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಗೌತಂ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಬಿ.ಪಿ. ತಿಪ್ಪೇಸ್ವಾಮಿ ಉದ್ಘಾಟಿಸಿದರು   

ಹಿರಿಯೂರು: ಆಧುನಿಕ ಕರ್ನಾಟಕ ನಿರ್ಮಾಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪಾತ್ರ ಮಹತ್ವದ್ದು. ಅದೇ ರೀತಿ ಹಿಂದುಳಿದ ವರ್ಗಗಳ ನೇತಾರ ದಿವಂಗತ ದೇವರಾಜ ಅರಸು ಅವರ ಆಡಳಿತ ಮತ್ತು ಅವರ ದೂರದೃಷ್ಟಿತ್ವ ಎಲ್ಲ ಕಾಲಕ್ಕೂ ಜನಪ್ರತಿನಿಧಿಗಳಿಗೆ ಮಾದರಿ ಎಂದು ಗೌತಂ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಬಿ.ಪಿ. ತಿಪ್ಪೇಸ್ವಾಮಿ ಹೇಳಿದರು.

ನಗರದ ಅಂಬೇಡ್ಕರ್ ಪಿಯು ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಹಾಗೂ ದಿವಂಗತ ದೇವರಾಜ ಅರಸು ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವದಾಸಿ ಪದ್ಧತಿ ರದ್ದುಗೊಳಿಸಿ, ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿದ್ದಲ್ಲದೆ ನೀರಾವರಿ, ಉದ್ಯೋಗಸೃಷ್ಟಿ, ಮಾಹಿತಿ ತಂತ್ರಜ್ಞಾನ ಅಭಿವೃದ್ಧಿ, ಕೈಗಾರಿಕೆಗಳ ಸ್ಥಾಪನೆ ಮೂಲಕ ನಿಜವಾದ ಅರ್ಥದಲ್ಲಿ ಒಡೆಯರ್ ಅವರು ರಾಜರ್ಷಿಯಾಗಿದ್ದರು ಎಂದು ಅವರು ತಿಳಿಸಿದರು.

ADVERTISEMENT

ದೇವರಾಜ ಅರಸು ಅವರು ಬಡತನ ನಿರ್ಮೂಲನೆ ಹಾಗೂ ಭೂಸುಧಾರಣೆಗೆ ಹೆಚ್ಚಿನ ಒತ್ತು ನೀಡಿದ್ದರು. ನಾಲ್ವಡಿಯವರು ಮತ್ತು ದೇವರಾಜ ಅರಸು ಅವರು ತಮ್ಮ ಕಾರ್ಯಕ್ರಮಗಳ ಮೂಲಕ ರಾಜ್ಯವನ್ನು ಇಡೀ ದೇಶ ಗಮನಿಸುವಂತೆ ಮಾಡಿದ್ದರು ಎಂದು ತಿಪ್ಪೇಸ್ವಾಮಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕೆ.ರಂಗಪ್ಪ, ಉಪನ್ಯಾಸಕರಾದ ನಾಗೇಂದ್ರಪ್ಪ, ಲೋಕೇಶ್, ಶಾಂತಕುಮಾರ್, ಮಂಜು, ರಜಾಕ್ ಸಾಬ್, ಪ್ರಕಾಶ್, ಇಂದೂಧರ್ ಗೌತಂ, ಪ್ರೇಮಾನಂದಗೌತಂ, ವೆಂಕಟೇಶ್, ಬಿ.ಎಂ. ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.