ADVERTISEMENT

ಮುರುಘಾ ಶರಣರ ವಿರುದ್ಧ ದೂರು ದಾಖಲಿಸಲು ಕುಮ್ಮಕ್ಕು: ಮತ್ತೊಬ್ಬ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 4:26 IST
Last Updated 3 ಡಿಸೆಂಬರ್ 2022, 4:26 IST
   

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸುವಂತೆ ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಆರೋಪದಡಿ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೊಬ್ಬರನ್ನು ಬಂಧಿಸಿದ್ದಾರೆ.

ಫೋಟೋಗ್ರಾಫರ್ ಮಯೂರ ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿದೆ.

ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಹಾಗೂ
ಮಠದ ಶಾಲಾ ಶಿಕ್ಷಕ ಬಸವರಾಜೇಂದ್ರ ಬಂಧಿತರಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಮತ್ತೊಬ್ಬ ಆರೋಪಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ತಲೆಮರೆಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.