ADVERTISEMENT

ಚಿತ್ರದುರ್ಗ: ಸರಕು ಸಾಗಣೆ ವಾಹನ ಅಪಘಾತ, ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 3:44 IST
Last Updated 27 ಅಕ್ಟೋಬರ್ 2020, 3:44 IST
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಟಾಟಾ ಏಸ್ ವಾಹನ
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಟಾಟಾ ಏಸ್ ವಾಹನ   

ಚಿತ್ರದುರ್ಗ: ಸರಕು ಸಾಗಣೆ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಿರಿಯೂರು ತಾಲ್ಲೂಕಿನ ಗೊರಲಡುಕು ಬಳಿಯ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಜಗದೀಶ್ (42) ಎಂದು ಗುರುತಿಸಲಾಗಿದೆ. ಓಂಕಾರ್ (26) ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ತಡರಾತ್ರಿ ಅಪಘಾತ ಸಂಭವಿಸಿದೆ.

ಜಗದೀಶ್ ಅವರು ಹೊಸದುರ್ಗದಿಂದ ಈರುಳ್ಳಿ ತುಂಬಿಕೊಂಡು ಬೆಂಗಳೂರು ಕಡೆ ಹೊರಟಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಈರುಳ್ಳಿ ತುಂಬಿದ ಟಾಟಾ ಏಸ್ ನಜ್ಜುಗುಜ್ಜಾಗಿದೆ ಎಂದು ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.