ADVERTISEMENT

ಬಿಜೆಪಿ ನಾಯಕರ ವಿರುದ್ಧ ಆಕ್ರೋಶ

ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟಿಸಿದ ಕಾಂಗ್ರೆಸ್‌ ಮುಖಂಡರು

​ಪ್ರಜಾವಾಣಿ ವಾರ್ತೆ
Published 17 ಜನವರಿ 2019, 13:33 IST
Last Updated 17 ಜನವರಿ 2019, 13:33 IST
ಬಿಜೆಪಿ ನಾಯಕರ ನಡೆ ವಿರೋಧಿಸಿ ಕಾಂಗ್ರೆಸ್‌ ಮುಖಂಡರು ಚಿತ್ರದುರ್ಗದಲ್ಲಿ ಗುರುವಾರ ಪ್ರತಿಭಟಿಸಿದರು
ಬಿಜೆಪಿ ನಾಯಕರ ನಡೆ ವಿರೋಧಿಸಿ ಕಾಂಗ್ರೆಸ್‌ ಮುಖಂಡರು ಚಿತ್ರದುರ್ಗದಲ್ಲಿ ಗುರುವಾರ ಪ್ರತಿಭಟಿಸಿದರು   

ಚಿತ್ರದುರ್ಗ:ಕಾಂಗ್ರೆಸ್ ಶಾಸಕರನ್ನು ಖರೀದಿಸಿ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ಹೊರಟಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಮುಖಂಡರು ಇಲ್ಲಿ ಗುರುವಾರ ಬಿಜೆಪಿ ಕಚೇರಿ ಎದುರು ಪ್ರತಿಭಟಿಸಿದರು.

ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ, ಸಮ್ಮಿಶ್ರ ಸರ್ಕಾರದ ಆಡಳಿತ ಸಹಿಸಲಾಗದ ಬಿಜೆಪಿ ವರಿಷ್ಠರು ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಕುದುರೆ ವ್ಯಾಪಾರದಲ್ಲಿ ತೊಡಗಿರುವುದು ಅತ್ಯಂತ ಖಂಡನೀಯ ಎಂದರು.

ಸರ್ಕಾರ ಪತನಗೊಳಿಸಲು ಅನೈತಿಕ ಮಾರ್ಗದಲ್ಲಿ ಹೊರಟಿರುವ ಬಿಜೆಪಿ ಮುಖಂಡರ ಕನಸು ಫಲಿಸುವುದಿಲ್ಲ. ಅಧಿಕಾರ ಪಡೆಯಲು ಇದೇ ರೀತಿ ಕುತಂತ್ರ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪಾತ್ಯರಾಜನ್, ಪದಾಧಿಕಾರಿಗಳಾದ ಅಜ್ಜಪ್ಪ, ಕೆ.ಪಿ. ಸಂಪತ್‌ಕುಮಾರ್, ಸೈಯದ್ ಅಲ್ಲಾಭಕ್ಷ್, ಆರ್. ಪ್ರಕಾಶ್, ಮಹಮದ್ ಅಶ್ರಫ್‌ಆಲಿ, ಡಿ.ಎಸ್. ಸೈಯದ್‌ ವಲಿಖಾದ್ರಿ, ಜಯಪ್ಪ, ಮಹಡಿ ಶಿವಮೂರ್ತಿ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.