ADVERTISEMENT

ಯಡಿಯೂರಪ್ಪ ವಿರುದ್ಧ ಪೋಕ್ಸೊ: ಕಳಂಕ ತರುವ ಪ್ರಯತ್ನ- ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2024, 13:15 IST
Last Updated 15 ಮಾರ್ಚ್ 2024, 13:15 IST
<div class="paragraphs"><p>ಮಾದಾರ ಚನ್ನಯ್ಯ ಗುರುಪೀಠದಲ್ಲಿ&nbsp;ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ </p></div>

ಮಾದಾರ ಚನ್ನಯ್ಯ ಗುರುಪೀಠದಲ್ಲಿ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

   

ಚಿತ್ರದುರ್ಗ: ರಾಜಕಾರಣದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ಹೆಸರಿಗೆ ಕಳಂಕ ತರುವ ಪ್ರಯತ್ನ ನಡೆದಿದೆ. ದೂರಿನಲ್ಲಿ ಯಾವುದೇ ಸದುದ್ದೇಶ ಇಲ್ಲ. ತನಿಖೆಯಲ್ಲಿ ಸತ್ಯ ಹೊರಬರುತ್ತದೆ ಎಂದು ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ದೂರುದಾರರ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಅನುಮಾನಗಳಿವೆ. ಅವರು ಈ ಹಿಂದೆ ಅನೇಕರ ವಿರುದ್ಧ ದೂರು ದಾಖಲಿಸಿರುವ ಕುರಿತು ತನಿಖೆ ನಡೆಸುವ ಅಗತ್ಯವಿದೆ. ಚುನಾವಣೆಯ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆಯುತ್ತವೆ. ಸತ್ಯಕ್ಕೆ ಯಾವತ್ತೂ ಜಯವಾಗುತ್ತದೆ’ ಎಂದು ಮಾದಾರ ಚನ್ನಯ್ಯ ಗುರುಪೀಠದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.