ADVERTISEMENT

ವೈದ್ಯಕೀಯ ಕಾಲೇಜು: ಶಾಸಕ, ಸಂಸದರ ಭಿನ್ನಾಭಿಪ್ರಾಯಕ್ಕೆ ಕಿಡಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 10:19 IST
Last Updated 27 ಜನವರಿ 2023, 10:19 IST
ಕೆ.ಟಿ.ಶಿವಕುಮಾರ್‌
ಕೆ.ಟಿ.ಶಿವಕುಮಾರ್‌   

ಚಿತ್ರದುರ್ಗ: ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸ್ಥಳ ಆಯ್ಕೆ ಮಾಡುವ ವಿಚಾರದಲ್ಲಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಹಾಗೂ ಸಂಸದ ಎ.ನಾರಾಯಣಸ್ವಾಮಿ ತಳೆದಿರುವ ಭಿನ್ನ ನಿಲುವು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದೆ ಎಂದು ಕರುನಾಡ ವಿಜಯಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಇಂಗಳದಾಳ್‌ ವ್ಯಾಪ್ತಿಯಲ್ಲಿ ಭೂಮಿ ಲಭ್ಯವಿದೆ ಎಂಬುದಾಗಿ ಸಂಸದರು ಹೇಳಿಕೆ ನೀಡಿದ್ದರು. ಜಿಲ್ಲಾ ಆಸ್ಪತ್ರೆಯ ಆವರಣವೇ ಕಾಲೇಜಿಗೆ ಸರಿಯಾದ ಸ್ಥಳ ಎಂಬುದಾಗಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಲೇಜಿಗೆ ಯಾವ ಸ್ಥಳವನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಸರ್ಕಾರಿ ವೈದ್ಯಕೀಯ ಕಾಲೇಜು ಚಿತ್ರದುರ್ಗ ಜನರ ದಶಕದ ಕನಸು. ಹೋರಾಟದ ಫಲವಾಗಿ ಇದು ನನಸಾಗುವ ಕಾಲ ಸನ್ನಿಹಿತವಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಒಗ್ಗೂಡಿ ಕಾಲೇಜು ಸ್ಥಾಪನೆಗೆ ಶ್ರಮಿಸಬೇಕು. ಭಿನ್ನ ನಿಲುವು ತಳೆದು ಸ್ಥಳ ಆಯ್ಕೆ ಪ್ರಕ್ರಿಯೆಯನ್ನು ವಿಳಂಬ ಮಾಡಿದರೆ ಕಾಲೇಜು ನಿರ್ಮಾಣಕ್ಕೆ ತೊಂದರೆ ಆಗಬಹುದು’ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ಮುಖಂಡರಾದ ಎಂ.ಆರ್‌.ಶಿವರಾಜ್‌, ರವಿಕುಮಾರ್‌ ನಾಯ್ಕ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.