ಚಿತ್ರದುರ್ಗ: ಕೊರೊನಾ ಸೋಂಕು ಹರಡಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ. ಈ ಆದೇಶ ಆ.16ರವರೆಗೆ ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿರಲಿದೆ.
ಧಾರ್ಮಿಕ ಸ್ಥಳಗಳಾದ ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ದೇವಸ್ಥಾನಗಳಲ್ಲಿ ದೇವರ ದರ್ಶನ ಹಾಗೂ ದೈನಂದಿನ ಪೂಜೆ ಹೊರತುಪಡಿಸಿ ಇತರೆ ಸೇವೆಗೆ ಅವಕಾಶವಿಲ್ಲ.
ಜಿಲ್ಲೆಯಾದ್ಯಂತ ಯಾವುದೇ ತರಹದ ಜಾತ್ರೆ, ಉತ್ಸವ, ಮೆರವಣಿಗೆ, ಪ್ರತಿಭಟನೆ ಸರ್ಕಾರವು ನಿಗದಿಪಡಿಸಿರುವ ಮಾರ್ಗಸೂಚಿಗಳಂತೆ ಕೈಗೊಳ್ಳುವ ಕಾರ್ಯಕ್ರಮಗಳನ್ನು ಹೊರತುಪಡಿಸಿ ದೊಡ್ಡ ಮಟ್ಟದ ಸಮಾರಂಭಗಳನ್ನು ನಿಷೇಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.