ಚಿತ್ರದುರ್ಗ: ತಾಲ್ಲೂಕಿನ ಕೆಳಗಳಹಟ್ಟಿಯ ಜಮೀನಿನಲ್ಲಿ ರೈತ ಮಹಿಳೆ ಭಾಗ್ಯಮ್ಮ (55) ಎಂಬುವರನ್ನು ಕೊಲೆ ಮಾಡಲಾಗಿದೆ.
ಭಾಗ್ಯಮ್ಮ ಅವರು ಮಂಗಳವಾರ ಬೆಳಿಗ್ಗೆ ಸೇವಂತಿ ಬೆಳೆಗೆ ನೀರು ಹಾಯಿಸಲು ಜಮೀನಿಗೆ ತೆರಳಿದ್ದರು. ಈ ವೇಳೆ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಕೆಲವರು ಕೊಚ್ಚಿ ಕೊಲೆ ಮಾಡಿದ್ದಾರೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಜಮೀನು ಅಳತೆ ವಿಚಾರದಲ್ಲಿ ಪಕ್ಕದ ಜಮೀನಿನ ಮಾಲೀಕರೊಂದಿಗೆ ಗಲಾಟೆ ನಡೆದಿತ್ತು. ಈ ಕುರಿತು ಗ್ರಾಮದಲ್ಲಿ ರಾಜಿ ಪಂಚಾಯಿತಿಗಳು ನಡೆದಿದ್ದವು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.