ADVERTISEMENT

ಚಿತ್ರದುರ್ಗ: ರೈತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಗುಬ್ಬಿ ತಾಲ್ಲೂಕು, ಬೆಂಗಳೂರಿನಲ್ಲಿ ನಡೆದ ಪ್ರಕರಣ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2023, 5:39 IST
Last Updated 2 ಏಪ್ರಿಲ್ 2023, 5:39 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು   

ಚಿತ್ರದುರ್ಗ: ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಗಂಗಯ್ಯನ ಪಾಳ್ಯ ಗ್ರಾಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ರೈತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಶನಿವಾರ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ‘ಗಂಗಯ್ಯನಪಾಳ್ಯ ಗ್ರಾಮದಲ್ಲಿ 30-40 ವರ್ಷಗಳಿಂದಲೂ ರೈತರು ಬಗರ್‌ಹುಕುಂ ಸಾಗುವಳಿ ಮಾಡುತ್ತಿದ್ದಾರೆ. ಈಗ ಅರಣ್ಯ ಇಲಾಖೆಯವರು ರೈತರ ಮೇಲೆ ಹಲ್ಲೆ ನಡೆಸಿ ಜಮೀನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಬೆಂಗಳೂರಿನ ಶಿವರಾಂ ಕಾರಂತ ಬಡಾವಣೆಯಲ್ಲಿರುವ ರೈತರ ಮೇಲೆ ಬಿ.ಡಿ.ಎ. ಅಧಿಕಾರಿಗಳ ದೌರ್ಜನ್ಯ ನಡೆಸಿ 5 ಎಕರೆ ಸಪೋಟ ತೋಟವನ್ನು ನಾಶ ಮಾಡಿದ್ದಾರೆ. ಈ ಜಾಗವನ್ನು ಶ್ರೀಮಂತರಿಗೆ, ರಾಜರಾಣಿಗಳಿಗೆ, ಅಧಿಕಾರಿಗಳಿಗೆ ಕೊಡಲು ಮುಂದಾಗಿದೆ’ ಎಂದು ದೂರಿದರು.

ADVERTISEMENT

ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಸ್‌.ಹಳ್ಳಿ ಮಲ್ಲಿಕಾರ್ಜುನ್‌, ಜಿಲ್ಲಾ ಪ್ರದಾನ ಕಾರ್ಯದರ್ಶಿ ರಾಮರೆಡ್ಡಿ, ಎಚ್‌.ಸದಾಶಿವಪ್ಪ, ಎನ್‌.ಕೆ.ರಾಜಶೇಖರಪ್ಪ, ಕೆ.ಕಲ್ಲೇಶಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.