ADVERTISEMENT

ಮೈತ್ರಿ ಪರ್ವದ ಬೃಹತ್ ಪರಿವರ್ತನಾ ಸಮಾವೇಶಕ್ಕೆ ಕ್ಷಣಗಣನೆ

ರಾಹುಲ್ ಅಗಮಿಸುತ್ತಿದ್ದಂತೆ ಸಮಾವೇಶ ಆರಂಭ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2019, 9:30 IST
Last Updated 13 ಏಪ್ರಿಲ್ 2019, 9:30 IST
   

ಚಿತ್ರದುರ್ಗ: ಇಲ್ಲಿನ ಜಯದೇವ ಮುರಾಘರಾಜೇಂದ್ರ ಕ್ರೀಡಾಂಗಣದಲ್ಲಿ ಏರ್ಪಡಿಸಿದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪರ್ವದ ಬೃಹತ್ ಪರಿವರ್ತನಾ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಗಮಿಸುತ್ತಿದ್ದಂತೆ ಸಮಾವೇಶ ಆರಂಭವಾಗಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಅವರು ಮತಯಾಚನೆ ಮಾಡಲಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ಮತ್ತು ಪಾವಗಡ ಸೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ತಾಲ್ಲೂಕಿನಿಂದ ಜನರು ಬಂದಿದ್ದಾರೆ.

ADVERTISEMENT

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.