ADVERTISEMENT

ಬಿಜೆಪಿಗೆ ಬರೆ ಎಳೆಯುವ ದಿನ ದೂರವಿಲ್ಲ

ಚುನಾವಣೆ ಫಲಿತಾಂಶಕ್ಕೆ ರೈತ ಸಂಘದ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 3 ಮೇ 2021, 10:20 IST
Last Updated 3 ಮೇ 2021, 10:20 IST
ನುಲೇನೂರು ಶಂಕರಪ್ಪ
ನುಲೇನೂರು ಶಂಕರಪ್ಪ   

ಚಿತ್ರದುರ್ಗ: ಐದು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತದಾರ ಹಕ್ಕು ಚಲಾವಣೆ ಮಾಡಿದ್ದು, ರೈತ ಹೋರಾಟದ ಫಲ. ಇನ್ನಾದರೂ ರೈತ ವಿರೋಧಿ ಕಾನೂನು ಹಿಂಪಡೆಯಿರಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.

ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರು ಕೇಂದ್ರದ ರೈತ ವಿರೋಧಿ ಕಾನೂನುಗಳ ವಿರುದ್ಧ ಮತ ಚಲಾಯಿಸಿದ್ದಾರೆ. ಬಿಜೆಪಿಗೆ ಇನ್ನಾದರೂ ಇದರ ಅರಿವು ಆಗಬೇಕಿದೆ. ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧ ಮಾಡಬೇಕಿದೆ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ರಸಗೊಬ್ಬರದ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಇಂಧನ ಬೆಲೆ ಹೆಚ್ಚಳವಾಗಿದ್ದು, ಟ್ರ್ಯಾಕ್ಟರ್‌ ಉಳುಮೆ ವೆಚ್ಚದಾಯಕ ಆಗುತ್ತಿದೆ. ಪೈಪು, ಪಂಪ್‌ಸೆಟ್‌ಗಳ ಬೆಲೆಯೂ ಏರಿಕೆಯಾಗಿದೆ. ಕೃಷಿಯ ವೆಚ್ಚ ಇಮ್ಮಡಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಜನಾಭಿ‍ಪ್ರಾಯ ವ್ಯಕ್ತವಾಗಿದೆ. ರಾಜ್ಯದ ರೈತರು ಬಿಜೆಪಿಗೆ ಬರೆ ಎಳೆಯುವ ದಿನ ದೂರವಿಲ್ಲ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.