ADVERTISEMENT

ಸುಧಾರಣೆಯತ್ತ ರೈತರ ಬದುಕು, ಸಂತಸದ ದಿನಗಳು ಬರುತ್ತಿವೆ: ಕೃಷಿ ಸಚಿವ ಬಿ.ಸಿ.ಪಾಟೀಲ

ಧ್ವಜಾರೋಹಣ ನೆರವೇರಿಸಿದ ಸಚಿವ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 4:46 IST
Last Updated 26 ಜನವರಿ 2022, 4:46 IST
ಜಿಲ್ಲಾ ಕವಾಯತು ಮೈದಾನದಲ್ಲಿ ಕೃಷಿ ಸಚಿವ ಸಚಿವ ಬಿ.ಸಿ.ಪಾಟೀಲ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಜಿಲ್ಲಾ ಕವಾಯತು ಮೈದಾನದಲ್ಲಿ ಕೃಷಿ ಸಚಿವ ಸಚಿವ ಬಿ.ಸಿ.ಪಾಟೀಲ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.    

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ರೈತರ ಬದುಕು ಸುಧಾರಣೆಯತ್ತ ಸಾಗುತ್ತಿದೆ. ರೈತರಿಗೆ ಸಂತಸದ ದಿನಗಳು ಬರುತ್ತಿವೆ ಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕೃಷಿ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ₹ 1 ಲಕ್ಷ ಕೋಟಿಯನ್ನು ಮೀಸಲು ಇಟ್ಟಿದೆ. ಆಹಾರ ಸಂಸ್ಕರಣೆಗೆ ಹತ್ತು ಸಾವಿರ ಕೋಟಿ ನೀಡಲಾಗಿದೆ. ಇದು ರೈತರ ಬದುಕನ್ನು ಹಸನ ಮಾಡಲಿದೆ ಎಂದು ಹೇಳಿದರು.

ADVERTISEMENT

ಕೋವಿಡ್ ಕಾಲದಲ್ಲಿಯೂ ದೇಶದ ಆರ್ಥಿಕ ಸ್ಥಿತಿ ಹಾಳಾಗದಂತೆ ನೋಡಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ. ಕೋವಿಡ್ ಅನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಮುಖ್ಯಮಂತ್ರಿ ವಿದ್ಯಾನಿಧಿ ಮೂಲಕ ರೈತ ಮಕ್ಕಳ ವ್ಯಾಸಂಗಕ್ಕೆ ನೆರವು ನೀಡಲಾಗುತ್ತಿದೆ ಎಂದರು

1985 ರಿಂದ 1994ರ ವರೆಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದೆ. ಸೆಲ್ಯೂಟ್ ಹೊಡೆಯುತ್ತಿದ್ದ ಇದೇ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಯೋಗ ನನ್ನದು. ಜನರ ಆಶೀರ್ವಾದದಿಂದ ಚಿತ್ರರಂಗದಿಂದ ರಾಜಕೀಯಕ್ಕೆ ಬಂದು ಈ ಹಂತದವರೆಗೆ ಬೆಳಲೆಯಲು ಸಾಧ್ಯವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.