ಹಿರಿಯೂರು: ಬೈಕ್ನಿಂದ ಉರುಳಿ ಬಿದ್ದ ಬೈಕ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಬ್ಬೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಬಬ್ಬೂರಿನ ವೇಮನರೆಡ್ಡಿ ಅವರ ಮಗ ಬಿ.ವಿ. ತಿಪ್ಪೇಸ್ವಾಮಿ (28) ಮೃತಪಟ್ಟವರು. ಗೆಳೆಯರೊಂದಿಗೆ ಜನ್ಮದಿನ ಆಚರಿಸಿಕೊಂಡು ಮನೆಗೆ ಒಬ್ಬರೇ ಹಿಂದಿರುಗುವಾಗ ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲು ತೋಡಿದ್ದ ಗುಂಡಿಯ ಮಣ್ಣಿನ ರಾಶಿಯ ಮೇಲೆ ಬೈಕ್ ಹತ್ತಿ ಉರುಳಿದ್ದರಿಂದ, ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.