ADVERTISEMENT

ಚಿತ್ರದುರ್ಗ: ಎತ್ತಿನ ಗಾಡಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2018, 4:54 IST
Last Updated 19 ಅಕ್ಟೋಬರ್ 2018, 4:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಬಳಿ ಎತ್ತಿನ ಗಾಡಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಮಲ್ಕಾಪುರ ಗ್ರಾಮದ ಪಾಲಯ್ಯ (28), ವಿಜಿಯಪ್ಪ (30) ಮೃತಪಟ್ಟವರು.

ಎತ್ತಿನಗಾಡಿಯಲ್ಲಿದ್ದ ಎಳು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಮಲ್ಕಾಪುರದ ಗ್ರಾಮಸ್ಥರು ಎತ್ತಿನ ಗಾಡಿಯಲ್ಲಿ ಚಿತ್ರಹಳ್ಳಿಯ ಚಿತ್ರಲಿಂಗೇಶ್ವರ ಅಂಬಿನೋತ್ಸವಕ್ಕೆ ತೆರಳುತ್ತಿದ್ದರು. ಶುಕ್ರವಾರ ನಸುಕಿನ 1 ಗಂಟೆ ಸುಮಾರು ಅಪಘಾತ ಸಂಭವಿಸಿದೆ ಎಂದು ಚಿತ್ರಹಳ್ಳಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.