ADVERTISEMENT

ನಿರಂತರ ಮಳೆ: ಹಿರಿಯೂರು-ಹೊಸದುರ್ಗ ಸಂಪರ್ಕ ಕಡಿತ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2022, 7:29 IST
Last Updated 7 ಸೆಪ್ಟೆಂಬರ್ 2022, 7:29 IST
ನಡು ರಸ್ತೆಯಲ್ಲಿ ಎರಡು ಲಾರಿಗಳು ಸಿಲುಕಿಕೊಂಡ ಪರಿಣಾಮ ಹಿರಿಯೂರು - ಹೊಸದುರ್ಗ ಮಾರ್ಗ ಸಂಪರ್ಕ ಕಡಿತ
ನಡು ರಸ್ತೆಯಲ್ಲಿ ಎರಡು ಲಾರಿಗಳು ಸಿಲುಕಿಕೊಂಡ ಪರಿಣಾಮ ಹಿರಿಯೂರು - ಹೊಸದುರ್ಗ ಮಾರ್ಗ ಸಂಪರ್ಕ ಕಡಿತ   

ಹಿರಿಯೂರು: ತಾಲ್ಲೂಕಿನ ಭರಮಗಿರಿ ಸಮೀಪ ನಡು ರಸ್ತೆಯಲ್ಲಿ ಎರಡು ಲಾರಿಗಳು ಸಿಲುಕಿಕೊಂಡ ಪರಿಣಾಮ ಹಿರಿಯೂರು - ಹೊಸದುರ್ಗ ಮಾರ್ಗ ಸಂಪರ್ಕ ಕಡಿತಗೊಂಡಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರಸ್ತೆ ಹಾಳಾಗಿದ್ದು ಈ ಸಮಸ್ಯೆ ಸೃಷ್ಟಿಯಾಗಿದೆ. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಪರದಾಡುತ್ತಿದ್ದಾರೆ.

ಹಿರಿಯೂರು ತಾಲ್ಲೂಕಿನ ಭರಮಗಿರಿ ಬೈಪಾಸ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ರಸ್ತೆಯಲ್ಲಿ ಸಿಲುಕಿಕೊಂಡ ಲಾರಿಗಳನ್ನು ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ. ರಸ್ತೆ ಸಂಪರ್ಕ ಕಡಿತದಿಂದ ಹಿರಿಯೂರಿನಿಂದ ಹೊಸದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ತಲುಪಲು ಚಿತ್ರದುರ್ಗ ಮೂಲಕ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.