
ಚಿಕ್ಕಜಾಜೂರು: ದೇಶದ ಮೊದಲ ಶಿಕ್ಷಕಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ಸಾವಿತ್ರಿಬಾಯಿ ಫುಲೆ ಅವರು ನಮ್ಮೆಲ್ಲರಿಗೂ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಶಾಲಾ ದತ್ತುದಾನಿ ಡಿ.ಸಿ. ಮೋಹನ್ ತಿಳಿಸಿದರು.
ಇಲ್ಲಿನ ಜನತಾ ಕಾಲೊನಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆ ಹಾಗೂ ಪೋಷಕರ ಮಹಾಸಭೆ ಕಾರ್ಯಕ್ರಮದಲ್ಲಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಎಸ್ಡಿಎಂಸಿ ಅಧ್ಯಕ್ಷ ಉಮೇಶ್ ಮಾತನಾಡಿದರು. ಜಿಲ್ಲಾಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಹುಮಾನ ಪಡೆದ ಶಾಲೆಯ ವಿದ್ಯಾರ್ಥಿಗಳಾದ ಜಿ. ಸ್ವರೂಪ, ಸಾಯಿ ರಾಮ್ ಮತ್ತು ಎಸ್. ವರ್ಷ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಶಿಕ್ಷಕ್ಷಿ ಪಿ. ಗಂಗಮ್ಮ, ಎಸ್ಡಿಎಂಸಿ ಉಪಾಧ್ಯಕ್ಷೆ ಪಾರ್ವತಿ, ಸದಸ್ಯರಾದ ಶೈಲಾ, ಸೌಭಾಗ್ಯ ಲಕ್ಷ್ಮಿ, ವೀಣಾ, ಲಕ್ಷ್ಮಿ, ಪುಷ್ಪಾ, ತಾಜುನ್ನಿಸ, ಬೈರೇಶ್, ಆನಂದ್, ಮಂಜುನಾಥ್ ಹಾಗೂ ಶಿಕ್ಷಕರಾದ ಡಿಕ್ಕಿ ಮಾಧವರಾಯ, ಗುರುಸ್ವಾಮಿ, ಸುಶೀಲಾ, ರೇಖಾ, ಮಂಜಮ್ಮ, ಶಶಿಕಲಾ, ಗಾಯಿತ್ರಿದೇವಿ, ಆಶಾ, ಅರುಣ್ ಕುಮಾರ್ ಹಾಗೂ ಪಾಲಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.