ಹೊಳಲ್ಕೆರೆ: ತಾಲ್ಲೂಕಿನ ಮಾಳೇನಹಳ್ಳಿ ಕಾವಲ್ನಲ್ಲಿ ಶನಿವಾರ ಸಂಜೆ ಸುರಿದ ಬಿರುಗಾಳಿ, ಮಳೆಗೆ ಹತ್ತಾರು ಮರಗಳು ಮುರಿದು ಬಿದ್ದಿವೆ.
ಹದಿನೈದು ನಿಮಿಷ ಮಳೆ ಸುರಿದಿದ್ದು, ಬಿರುಗಾಳಿಗೆ ಬೇವಿನ ಮರಗಳು ಧರೆಗೆ ಉರುಳಿವೆ. ಕೆಲವು ಮರಗಳು ಮನೆಗಳು, ವಿದ್ಯುತ್ ತಂತಿ ಮೇಲೆ ಬಿದ್ದಿವೆ. ಕೆಲವೆಡೆ ವಿದ್ಯುತ್ ಕಂಬಗಳೂ ನೆಲಕ್ಕೆ ಉರುಳಿವೆ. ಇದರಿಂದ ಮಾಳೇನಹಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.
ಬೊಮ್ಮನ ಕಟ್ಟೆ, ಗುಂಡೇರಿ ಭಾಗದಲ್ಲೂ ಬಿರುಸಿನ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.