ADVERTISEMENT

ಪುರುಷೋತ್ತಮಾನಂದಪುರಿ ಸ್ವಾಮೀಜಿ ಕೋವಿಡ್‌ನಿಂದ ಗುಣಮುಖ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 1:55 IST
Last Updated 26 ಸೆಪ್ಟೆಂಬರ್ 2020, 1:55 IST
ಪುರುಷೋತ್ತಮಾನಂದಪುರಿ ಸ್ವಾಮೀಜಿ
ಪುರುಷೋತ್ತಮಾನಂದಪುರಿ ಸ್ವಾಮೀಜಿ   

ಹೊಸದುರ್ಗ: ತಾಲ್ಲೂಕಿನ ಬ್ರಹ್ಮವಿದ್ಯಾನಗರ ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಸೆ. 26ರಂದು ಶ್ರೀಮಠಕ್ಕೆ ಬರಲಿದ್ದಾರೆ ಎಂದು ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಆರ್‌.ಮೂರ್ತಿ ಉಪ್ಪಾರ್‌ ತಿಳಿಸಿದ್ದಾರೆ.

ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉಪ್ಪಾರ ಸಮುದಾಯದ ಪರವಾಗಿ ಕಣಿವೆ ಮಾರಮ್ಮ ದೇವಿಗೆ ಅಭಿಷೇಕ ಪೂಜೆ ಸಲ್ಲಿಸಲಾಯಿತು. ಸ್ವಾಮೀಜಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ 6 ದಿನ ಕಾಲ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT