ADVERTISEMENT

ಚಿತ್ರದುರ್ಗ | ಡಿವೈಡರ್‌ಗೆ ಕಾರು ಡಿಕ್ಕಿ: ತಮಿಳುನಾಡಿನ ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 1 ಮೇ 2025, 7:36 IST
Last Updated 1 ಮೇ 2025, 7:36 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಚಿತ್ರದುರ್ಗ: ತಾಲ್ಲೂಕಿನ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಗುರುವಾರ ಬೆಳಿಗ್ಗೆ ಇನ್ನೊವಾ ಕಾರಿನ ಟೈರ್‌ ಸ್ಫೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡು ಮೂಲದ ಮೂವರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ.

ADVERTISEMENT

ತಮಿಳುನಾಡು, ಕೃಷ್ಣಗಿರಿ ಜಿಲ್ಲೆಯ ಪೊಲೀಸ್‌ ಸಿಬ್ಬಂದಿ ಅರ್ಜುನ್‌ (35), ಶರಣ್‌ (28), ಶ್ರೀಧರ್‌ (28) ಮೃತಪಟ್ಟವರು. ಐವರು ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಅಪಾಯದಿಂದ ಪಾರಾಗಿದ್ದಾರೆ.

9 ಜನರ ತಂಡ ಗೋವಾಕ್ಕೆ ಪ್ರವಾಸಕ್ಕೆಂದು ತೆರಳುತ್ತಿದ್ದರು. ಅರ್ಜುನ್‌ ಕಾರು ಚಾಲನೆ ಮಾಡುತ್ತಿದ್ದರು. ಸೀಬಾರ ಬಳಿಯ ಗೋಶಾಲೆ ಮುಂಭಾಗದಲ್ಲೇ ಘಟನೆ ನಡೆದಿದೆ. ಟೈರ್‌ ಸ್ಫೋಟಗೊಂಡ ಕೂಡಲೇ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಉರುಳಿದೆ. ಈ ವೇಳೆ ಪಕ್ಕದ ರಸ್ತೆಯಲ್ಲಿ ಯಾವುದೇ ವಾಹನ ಬರುತ್ತಿರಲಿಲ್ಲ, ಹೀಗಾಗಿ ಹೆಚ್ಚಿನ ಅಪಾಯ ತಪ್ಪಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು, ಡಿವೈಎಸ್‌ಪಿ ದಿನಕರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.