ADVERTISEMENT

ಹಿರಿಯೂರು: ರಾಜ್ಯ ಹೆದ್ದಾರಿ ಕಾಮಗಾರಿಗೆ ಟೆಂಡರ್ ಕರೆಯಲು ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2024, 16:10 IST
Last Updated 10 ಆಗಸ್ಟ್ 2024, 16:10 IST
ಹಿರಿಯೂರಿನಲ್ಲಿ ಸಚಿವರಾದ ಡಿ. ಸುಧಾಕರ್, ಸತೀಶ್ ಜಾರಕಿಹೊಳಿ ಅವರು ಮರಡಿಹಳ್ಳಿ–ಹರಿಯಬ್ಬೆ ರಸ್ತೆ ಪರಿಶೀಲಿಸಿದರು. ಶಾಸಕ ಟಿ. ರಘುಮೂರ್ತಿ ಹಾಗೂ ಇಲಾಖೆ ಎಂಜಿನಿಯರ್‌ಗಳು ಉಪಸ್ಥಿತರಿದ್ದರು
ಹಿರಿಯೂರಿನಲ್ಲಿ ಸಚಿವರಾದ ಡಿ. ಸುಧಾಕರ್, ಸತೀಶ್ ಜಾರಕಿಹೊಳಿ ಅವರು ಮರಡಿಹಳ್ಳಿ–ಹರಿಯಬ್ಬೆ ರಸ್ತೆ ಪರಿಶೀಲಿಸಿದರು. ಶಾಸಕ ಟಿ. ರಘುಮೂರ್ತಿ ಹಾಗೂ ಇಲಾಖೆ ಎಂಜಿನಿಯರ್‌ಗಳು ಉಪಸ್ಥಿತರಿದ್ದರು   

ಹಿರಿಯೂರು: ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮನವಿ ಮೇರೆಗೆ ಹಿರಿಯೂರು ತಾಲ್ಲೂಕಿನಲ್ಲಿ ₹ 22 ಕೋಟಿ ವೆಚ್ಚದಲ್ಲಿ ಎರಡು ರಾಜ್ಯ ಹೆದ್ದಾರಿಗಳ ನಿರ್ಮಾಣಕ್ಕೆ ಟೆಂಡರ್ ಕರೆಯುವಂತೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲ್ಲೂಕಿನ ಮರಡಿಹಳ್ಳಿಯಿಂದ ಕಂದಿಕೆರೆ ಮಾರ್ಗವಾಗಿ ಹರಿಯಬ್ಬೆ ಗ್ರಾಮವನ್ನು ಸೇರುವ ಒಂದು ರಸ್ತೆ, ಮೇಟಿಕುರ್ಕೆ ಗ್ರಾಮದಿಂದ ರಂಗೇನಹಳ್ಳಿ ಮಾರ್ಗವಾಗಿ ಶಿಡ್ಲಯ್ಯನಕೋಟೆ ಗ್ರಾಮವನ್ನು ಸೇರುವ 60 ರಿಂದ 70 ಕಿ.ಮೀ. ವಿಸ್ತೀರ್ಣದ ರಸ್ತೆ ನಿರ್ಮಾಣಕ್ಕೆ ನೆರವು ನೀಡಬೇಕು ಎಂದು ಸಚಿವ ಡಿ. ಸುಧಾಕರ್, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್ ಬಾಬು ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಅವರು ರಸ್ತೆ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಟೆಂಡರ್ ಕರೆಯಲು ಸೂಚಿಸಿದರು.

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಲೋಕೋಪಯೋಗಿ ಇಲಾಖೆ ಸೂಪರಿಂಟೆಂಡೆಂಟ್ ಎಂಜಿನಿಯರ್ ಗಣೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾಗರಾಜ್, ಸಹಾಯಕ ಎಂಜಿನಿಯರ್‌ಗಳಾದ ಅನಂತರಾಜ್, ರವಿಶಂಕರ್, ಮುಖಂಡರಾದ ಖಾದಿ ರಮೇಶ್, ಈರಲಿಂಗೇಗೌಡ, ಪೃಥ್ವಿ, ಅವಿನಾಶ್, ವಿ.ಶಿವಕುಮಾರ್, ಜ್ಞಾನೇಶ್ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.