ADVERTISEMENT

ಹಿರಿಯೂರು | ತೇರುಮಲ್ಲೇಶ್ವರ ಪತ್ತಿನ ಸಹಕಾರ ಸಂಘ; ₹8.70 ಲಕ್ಷ ಲಾಭ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2024, 16:05 IST
Last Updated 10 ಆಗಸ್ಟ್ 2024, 16:05 IST
ಹಿರಿಯೂರಿನ ರೋಟರಿ ಸಭಾಭವನದಲ್ಲಿ ನಡೆದ ತೇರುಮಲ್ಲೇಶ್ವರ ಪತ್ತಿನ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಗಣ್ಯರು ಉದ್ಘಾಟಿಸಿದರು
ಹಿರಿಯೂರಿನ ರೋಟರಿ ಸಭಾಭವನದಲ್ಲಿ ನಡೆದ ತೇರುಮಲ್ಲೇಶ್ವರ ಪತ್ತಿನ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಗಣ್ಯರು ಉದ್ಘಾಟಿಸಿದರು   

ಹಿರಿಯೂರು: ನಗರದ ತೇರುಮಲ್ಲೇಶ್ವರ ಪತ್ತಿನ ಸಹಕಾರ ಸಂಘವು 2023–24ನೇ ಸಾಲಿನಲ್ಲಿ ₹ 3.17 ಕೋಟಿ ವಹಿವಾಟು ನಡೆಸುವ ಮೂಲಕ ₹ 8.70 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ. ತಿಪ್ಪೇಸ್ವಾಮಿ ಹೇಳಿದರು.

ನಗರದ ರೋಟರಿ ಸಭಾಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.