ಹರಿಯಬ್ಬೆ (ಧರ್ಮಪುರ): ಇಲ್ಲಿನ ನಿವಾಸಿ ಗೋವಿಂದಪ್ಪ (50) ಸಾಲದ ಹೊರೆ ತಾಳಲಾರದೇ ವಿಷ ಕುಡಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಗೋವಿಂದಪ್ಪ ವಿವಿಧ ಸಂಘ ಸಂಸ್ಥೆಗಳಲ್ಲಿ ಮತ್ತು ಖಾಸಗಿಯಾಗಿ ₹ 6 ಲಕ್ಷ ಸಾಲ ಮಾಡಿದ್ದು, ಮಳೆಯಾಗದೇ ಬೆಳೆ ಬಾರದೇ ಇದ್ದುದರಿಂದ ಗುರುವಾರ ಮಧ್ಯರಾತ್ರಿ ತಮ್ಮ ಜಮೀನಿನಲ್ಲಿ ವಿಷ ಕುಡಿದಿದ್ದಾರೆ.
ತಕ್ಷಣ ಅವರನ್ನು ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಯಿತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನಪ್ಪಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.