ADVERTISEMENT

ಈಜಲು ಹೋಗಿದ್ದ ವ್ಯಕ್ತಿಯ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 5:05 IST
Last Updated 14 ಮಾರ್ಚ್ 2023, 5:05 IST

ಹಿರಿಯೂರು: ತಾಲ್ಲೂಕಿನ ಚಿಕ್ಕಸಿದ್ದವ್ವನಹಳ್ಳಿ ಕೆರೆಯಲ್ಲಿ ಶನಿವಾರ ಸ್ನೇಹಿತರೊಂದಿಗೆ ಈಜಲು ಹೋಗಿ ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಭಾನುವಾರ ಪತ್ತೆಯಾಗಿದೆ.

ಕೋವೇರಹಟ್ಟಿ ಗ್ರಾಮದ ಶಿವಮೂರ್ತಿ ಅವರ ಪುತ್ರ ಧನರಾಜ್ (30) ಮೃತರು.

‘ಮೂರು ಜನ ಸ್ನೇಹಿತರು ಒಂದೇ ಬೈಕಿನಲ್ಲಿ ಸಮೀಪದ ಚಿಕ್ಕಸಿದ್ದವ್ವನಹಳ್ಳಿ ಕೆರೆಗೆ ಹೋಗಿದ್ದರು. ಮಗನ ಸಾವಿನ ಬಗ್ಗೆ ಅನುಮಾನಗಳಿದ್ದು, ತನಿಖೆ ನಡೆಸಬೇಕು’ ಎಂದು ಶಿವಮೂರ್ತಿ ಐಮಂಗಲ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.