ಹೊಸದುರ್ಗ: ತಾಲ್ಲೂಕಿನ ಮತ್ತೋಡು ಹೋಬಳಿಯ ಕಪ್ಪನಾಯಕನಹಳ್ಳಿ ಶನಿವಾರ ಸಂಜೆ ಸಿಡಿಲು ಬಡಿದು ಐದು ಮೇಕೆಗಳು, ಒಂದು ಕುರಿ ಮೃತಪಟ್ಟಿವೆ.
ಕಪ್ಪನಾಯಕನಹಳ್ಳಿ ರಂಗಯ್ಯ ಹಾಗೂ ಹೊರಕೇರಪ್ಪ ಅವರಿಗೆ ಕುರಿ, ಮೇಕೆಗಳು ಸೇರಿವೆ. ₹ 50 ಸಾವಿರ ನಷ್ಟವಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.