ಚಿತ್ರದುರ್ಗ: ಜಿಲ್ಲೆಯಲ್ಲಿ ನಿಗಾ ವಹಿಸುವ ಉದ್ದೇಶದಿಂದ ಗುರುತಿ ಸಿದ್ದ 233 ಜನರಲ್ಲಿ117 ಜನರು 14 ದಿನಗಳ ಕ್ವಾರಂಟೈನ್ ಅವಧಿ
ಯನ್ನು ಪೂರ್ಣಗೊಳಿಸಿದ್ದಾರೆ. ಯಾರೊಬ್ಬರಲ್ಲೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸದ್ಯ 86 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಮನೆಯಲ್ಲಿಯೇ ಪ್ರತ್ಯೇಕಿಸಿ ನಿಗಾ ವಹಿಸಲಾಗಿದೆ. 91 ಶಂಕಿತರ ಗಂಟಲು ದ್ರವ ಹಾಗೂ ರಕ್ತ ಮಾದರಿಯನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿತ್ತು.
ಈ ಪೈಕಿ ಈವರೆಗೆ 71 ಜನರ ವರದಿ ನೆಗೆಟಿವ್ ಬಂದಿದೆ. ಇಬ್ಬರು ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ಇದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.