ADVERTISEMENT

ಚಿನ್ನಾಭರಣ ಕಳವು: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 27 ಮೇ 2022, 5:02 IST
Last Updated 27 ಮೇ 2022, 5:02 IST

ಚಳ್ಳಕೆರೆ: ವಿಠಲನಗರದ ಮನೆಯೊಂದರಲ್ಲಿ ₹ 2.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಗಳನ್ನು ಇಲ್ಲಿನ ಪೊಲೀಸರು ಬುಧವಾರ ತುಮಕೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಶಿರಾ ತಾಲ್ಲೂಕಿನ ಹೆಂದೊರೆ ಗ್ರಾಮದ ಶಿವಣ್ಣ ಮತ್ತು ಚಳ್ಳಕೆರೆ ಗಾಂಧಿನಗರದ ಆನಂದ ಬಂಧಿತ ಆರೋಪಿಗಳು.

ಮೇ 10ರಂದು ವಿಠಲನಗರದ ಮನೆಯೊಂದರ ಬಾಗಿಲು ಮುರಿದು ಬೆಳ್ಳಿ, ಬಂಗಾರದ ಅಭರಣವನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದರು.

ADVERTISEMENT

ತುಮಕೂರಿನಲ್ಲಿ ಅನುಮಾಸ್ಪದವಾಗಿ ತಿರುಗಾಡುತ್ತಿದ್ದವರನ್ನು ಹಿಡಿದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದು ಒಪ್ಪಿಕೊಂಡರು.ಜಿಲ್ಲಾ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಪಿಎಸ್ಐ ಸತೀಶ್‍ನಾಯ್ಕ ತಿಳಿಸಿದ್ದಾರೆ. ಪೊಲೀಸ್‌ ಇನ್‌ಸ್ಪೆಕ್ಟರ್‌ ಎಸ್.ಜೆ. ತಿಪ್ಪೇಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.