ADVERTISEMENT

ಚಿತ್ರದುರ್ಗ: ಶಾಸಕ ಗೋಪಾಲಕೃಷ್ಣ ಮನೆಯಲ್ಲಿ ಕಳವು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 4:32 IST
Last Updated 20 ಏಪ್ರಿಲ್ 2019, 4:32 IST
ಎನ್.ವೈ‌. ಗೋಪಾಲಕೃಷ್ಣ
ಎನ್.ವೈ‌. ಗೋಪಾಲಕೃಷ್ಣ   

ಚಿತ್ರದುರ್ಗ: ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ‌. ಗೋಪಾಲಕೃಷ್ಣ ಮನೆಯ ಬೀಗ ಮುರಿದು ಕಳವು ಮಾಡಲಾಗಿದೆ.

ಚಿತ್ರದುರ್ಗ ನಗರದ ಧವಳಗಿರಿ ಬಡಾವಣೆಯಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ.

ಮನೆಯ ಬೀರುವಿನಲ್ಲಿದ್ದ ನಗದು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಶಾಸರಾಗಿರುವ ಗೋಪಾಲಕೃಷ್ಣ ಮೂಲತಃ ಮೊಳಕಾಲ್ಮುರು ತಾಲ್ಲೂಕಿನವರು. ಚಿತ್ರದುರ್ಗಕ್ಕೆ ಬಂದಾಗ ಈ ಮನೆಯಲ್ಲಿ ತಂಗುತ್ತಿದ್ದರು. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಇರುವುದರಿಂದ ಹಲವು ದಿನಗಳಿಂದ ಮನೆ ಬೀಗ ಹಾಕಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.