ADVERTISEMENT

ಮೊಳಕಾಲ್ಮುರು: ತಾಯಿ, ಮಗ ಸಿಡಿಲಿಗೆ ಬಲಿ

​ಪ್ರಜಾವಾಣಿ ವಾರ್ತೆ
Published 4 ಮೇ 2022, 15:41 IST
Last Updated 4 ಮೇ 2022, 15:41 IST
   

ಮೊಳಕಾಲ್ಮುರು: ಕುರಿ ಮೇಯಿಸಲು ತೆರಳಿದ್ದ ತಾಯಿ, ಮಗ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗಳಹಟ್ಟಿಯಲ್ಲಿ ಬುಧವಾರ ನಡೆದಿದೆ.

ಮೇಗಳಹಟ್ಟಿಯ ಮಾರಕ್ಕ (40), ಮಗ ವೆಂಕಟೇಶ (17) ಮೃತಪಟ್ಟವರು. ಬುಧವಾರ ಸಂಜೆ ಕುರಿ ಮೇಯಿಸಿಕೊಂಡು ಮನೆಗೆ ಮರಳುವಾಗ ಗುಡುಗು, ಬಿರುಗಾಳಿ ಸಹಿತ ಮಳೆ ಆರಂಭವಾಗಿದೆ.

ಸಮೀಪದ ಹುಣಸೆ ಮರದಡಿ ಆಶ್ರಯ ಪಡೆದಿದ್ದ ಇವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಕತ್ತಲಾದರೂ ಕುರಿ ಮನೆಗೆ ಮರಳದಿರುವುದರಿಂದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.