ಭರಮಸಾಗರ: ಪಟ್ಟಣದ ಹೃದಯ ಭಾಗದ ವೃತ್ತ (ಚನ್ನಜ್ಜಿ ಸರ್ಕಲ್)ದಲ್ಲಿ ಅನಧಿಕೃತವಾಗಿ ನಿರ್ಮಾಣಗೊಳ್ಳುತ್ತಿದ್ದ ಕಟ್ಟಡವನ್ನು ಶನಿವಾರ ಲೋಕೋಪಯೋಗಿ ಇಲಾಖೆ ತೆರವುಗೊಳಿಸಿತು.
ಜಿಲ್ಲಾ ರಸ್ತೆಗೆ ಸೇರಬೇಕಾದ ರಸ್ತೆಯ ಬದಿಯಲ್ಲಿಯೇ ಹಿಂದೆ ಕಟ್ಟಡವನ್ನು ಹೊಂದಿದ್ದ ಮಾಲೀಕರು ಮತ್ತೆ ಮಳಿಗೆಗಳನ್ನು ಕಟ್ಟುತ್ತಿದ್ದರು. ಇದನ್ನು ಗಮನಿಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್ನಲ್ಲಿ ಕಟ್ಟಡವನ್ನು ತೆರವುಗೊಳಿಸಿದರು. ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೃಷ್ಣಪ್ಪ, ಸಹಾಯಕ ಎಂಜಿನಿಯರ್ ಜಯಣ್ಣ, ಪಿಎಸ್ಐ ರಾಜು, ಪಿಡಿಒ ಶಿವಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.