ADVERTISEMENT

ಅನಧಿಕೃತ ಬಿತ್ತನೆ ಬೀಜ ವಶ

​ಪ್ರಜಾವಾಣಿ ವಾರ್ತೆ
Published 27 ಮೇ 2022, 5:09 IST
Last Updated 27 ಮೇ 2022, 5:09 IST

ಚಿತ್ರದುರ್ಗ: ಅನಧಿಕೃತ ಸೂರ್ಯಕಾಂತಿ ಬಿತ್ತನೆ ಬೀಜ ಸಾಗಣೆ ಮಾಡುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಕೃಷಿ ಅಧಿಕಾರಿಗಳು ಬಿತ್ತನೆ ಬೀಜವನ್ನು ವಶಕ್ಕೆ ಪಡೆದಿದ್ದಾರೆ.

ರಾಣೆಬೆನ್ನೂರಿನಿಂದ ಆಂಧ್ರಪ್ರದೇಶದ ಹಿಂದೂಪುರಕ್ಕೆ ಹೊರಟಿದ್ದ ವಾಹನವನ್ನು ಭರಮಸಾಗರದ ಬಳಿ ತಡೆದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 1,200 ಕೆ.ಜಿ. ತೂಕದ ಬಿತ್ತನೆ ಬೀಜವನ್ನು ಜಪ್ತಿ ಮಾಡಲಾಗಿದೆ.

‘ಸೂರ್ಯಕಾಂತಿ ಮತ್ತು ಮೆಕ್ಕೆಜೋಳದ ಬೀಜಗಳನ್ನು ರೈತರು ಪರಿಶೀಲಿಸಿ ಖರೀದಿಸಬೇಕು. ಅಧಿಕೃತ ಬೀಜ ಪರವಾನಗಿ ಹೊಂದಿದ ಕೃಷಿ ಪರಿಕರ ಮಾರಾಟಗಾರರಿಂದ ಖರೀದಿಸಬೇಕು. ಸಹಿ ಮಾಡಿದ ಬಿಲ್ ತಪ್ಪದೇ ಪಡೆಯಬೇಕು’ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್‍ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.